ಜೂ. 12ಕ್ಕೆ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ

ಶನಿವಾರ, 8 ಜೂನ್ 2019 (16:48 IST)
ಬಹು ನಿರೀಕ್ಷಿತ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೆ ಮಹೂರ್ತ ನಿಗದಿಯಾಗಿದೆ.

ಜೂನ್ 12 ರಂದು ಬೆಳಗ್ಗೆ 11.30ಕ್ಕೆ ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ನಡೆಯಲಿದೆ. ಕೈಪಾಳೆಯದ ಬಂಡಾಯದ ಹಾಗೂ ಲೋಕಸಮರದ ಸೋಲಿನ ನಡುವೆಯೇ ವಿಸ್ತರಣೆ ನಡೆಯುತ್ತಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿದ್ದರು. ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲು ಆಹ್ವಾನ ನೀಡಿದ್ದಾರೆ.

ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಬಂಡಾಯ, ಅತೃಪ್ತಿ ಹಾಗೂ ರಾಜಕೀಯ ಲೆಕ್ಕಾಚಾರದ ಮೇಲೆಯೇ ಸ್ಥಾನ ಹಂಚಿಕೆಗೆ ಮೈತ್ರಿ ಪಕ್ಷಗಳು ಗಂಭೀರವಾಗಿ ಚಿಂತಿಸಿ ಹೆಜ್ಜೆ ಇಡುತ್ತಿದೆ ಎನ್ನಲಾಗುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ