ಕರ್ನಾಟಕ ವಿವಿ ನೇಮಕಾತಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ವಿಸಿ ವಾಲೀಕಾರ್ ಅವರಿಗೆ ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಲೀಕರ್ಗೆ 2001ರಲ್ಲಿ ಬೈಪಾಸ್ ಸರ್ಜರಿ ಆಗಿತ್ತೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ವಿಚಾರಣೆ ನಡೆಯುವುದಿಲ್ಲ. ವಾಲೀಕರ್ ಮತ್ತು ಇತರರು ಲೋಕಾಯುಕ್ತ ಕೋರ್ಟ್ಗೆ ಈಗಾಗಲೇ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಜಾಮೀನಿಗೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾಗಿದೆ.