ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಧೈರ್ಯದಿಂದ ದೂರು ದಾಖಲಿಸಿದ್ದಾರೆ. ಮಹಿಳಾ ಅಧಿಕಾರಿಗಳ ಜೊತೆ ಕೆ. ಮರಿಗೌಡ ನಡೆದುಕೊಂಡ ವರ್ತನೆ ಸರಿಯೇ. ಹೀಗಾದರೆ ರಾಜ್ಯದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುವುದು ಹೇಗೆ ಎಂದು ನ್ಯಾಯಾಧೀಶರಾದ ಬೈರಾರೆಡ್ಡಿ ಅವರು ಕೆ.ಮರಿಗೌಡ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.