ಜ್ಯೋತಿ ಚೇತರಿಕೆ...ಶಿವಕುಮಾರ್ ಸ್ಥಿತಿ ಗಂಭೀರ

ಸೋಮವಾರ, 28 ಆಗಸ್ಟ್ 2023 (18:01 IST)
ಬಿಬಿಎಂಪಿ ಕ್ವಾಲಿಟಿ ಕಂಟ್ರೋಲ್ ರೂಮ್​​ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ 9 ಮಂದಿ ಸುಟ್ಟು ಗಾಯಗೊಂಡಿದ್ದರು. ಗಾಯಗೊಂಡ 9 ಜನರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲೆ ಮಾಡಿದ್ರು. ಕ್ವಾಲಿಟಿ ಕಂಟ್ರೋಲ್ ರೂಂನ ಮುಖ್ಯ ಇಂಜಿನಿಯರ್ ಶಿವಕುಮಾರ್ ಹಾಗೂ ಗಣಕಯಂತ್ರ ಆಪರೇಟರ್ ಜ್ಯೋತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಜ್ಯೋತಿ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ. ಇನ್ನೂ ಶಿವಕುಮಾರ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣ್ತಿಲ್ಲ. ಈಗಾಗಲೇ ಬೇರೆ ರಾಜ್ಯದ ವೈದ್ಯರು ಕೂಡ ಚಿಕಿತ್ಸೆ ನೀಡಿದ್ದಾರೆ. ಆದ್ರು ಕೂಡ ದೇಹದಲ್ಲಿ ಯಾವುದೇ ಬದಲಾವಣೆ ಕಾಣ್ತಿಲ್ಲ. ತೀವ್ರ ಗಾಯಗೊಂಡಿರುವ ಮುಖ್ಯ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ