ಆತ್ಮಹತ್ಯೆ ಮಾಡಿಕೊಂಡ ಕಬ್ಬಡಿ ಕೋಚರ್

ಬುಧವಾರ, 17 ಅಕ್ಟೋಬರ್ 2018 (11:25 IST)
ದಾವಣಗೆರೆ : ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕಬ್ಬಡಿ ಕೋಚ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.


ರುದ್ರಪ್ಪ ಹೊಸಮನಿ ನೇಣಿಗೆ ಶರಣಾಗಿರುವ ಕಬಡ್ಡಿ ಕೋಚರ್. ಉತ್ತರ ಕರ್ನಾಟಕ ಮೂಲದವರಾಗಿದ್ದ ಇವರು ಬೆಂಗಳೂರಿನಲ್ಲಿ ಕಬಡ್ಡಿ ಕೋಚರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಆದರೆ ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗಲೇ ರುದ್ರಪ್ಪ ಹೊಸಮನಿ ಡೆತ್​ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ