‘ಕಲ್ಯಾಣ ಕರ್ನಾಟಕ ಹೆಸರಿಗೆ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ’

ಶುಕ್ರವಾರ, 13 ಸೆಪ್ಟಂಬರ್ 2019 (14:53 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗತೊಡಗಿದೆ.

ಮರುನಾಮಕರಣಕ್ಕೆ ಯಾವುದೇ ಬೆಲೆ ಇಲ್ಲ. ಹೀಗಂತ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಿಡಿಕಾರಿದ್ದಾರೆ.
ಕಲ್ಯಾಣ ಕರ್ನಾಟಕ ಅಂತ ಮರು ನಾಮಕರಣ ಮಾಡಿರೋದು ಸರಕಾರ. ಆದರೆ ಸರಕಾರದ ಈ ಕ್ರಮಕ್ಕೆ ಅಸಲಿಗೆ ಮಾನ್ಯತೆಯೇ ಇಲ್ಲ ಅಂತ ಹೇಳಿದ್ದಾರೆ.

ಸಂಸತ್ ನಲ್ಲಿ ಅನುಮೋದನೆಗೊಳ್ಳಬೇಕು. ಅದಕ್ಕೆ ಸಂವಿಧಾನ ತಿದ್ದುಪಡಿಯಾದಾಗ ಮರುನಾಮಕರಣ ಸಾಧ್ಯ. ಆದರೆ ಸರಕಾರ ಈಗ ಮಾಡಿರೋ ಕಲ್ಯಾಣ ಕರ್ನಾಟಕ ಮರುನಾಮಕರಣಕ್ಕೆ ಕಡವೆ ಕಾಸಿನ ಕಿಮ್ಮತ್ತು ಇಲ್ಲ ಅಂತ ಹರಿಹಾಯ್ದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ