ಕಂಬಳಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಭಾನುವಾರ, 29 ಜನವರಿ 2017 (12:24 IST)
ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 150 ಕ್ಕೂ ಹೆಚ್ಚು ಸಂಘಟನೆಗಳು ಬೃಹತ್ ಪ್ರತಿಭಟನೆ ಕೈಗೊಂಡಿವೆ. 
ಕಂಬಳ ಕ್ರೀಡೆಗೆ ಎಲ್ಲರೂ ಬೆಂಬಲ ನೀಡಬೇಕು. ಆಧ್ಯಾದೇಶ ತಂದಾದರೂ ಕಂಬಳವನ್ನು ಉಳಿಸಬೇಕಾಗಿದೆ ಎಂದು ಸಾವಿರಾರು ಪ್ರತಿಭಟನಾಕಾರರು ಒತ್ತಾಯಿಸಿದರು. 
 
ಕನ್ನಡಪರ ಸಂಘಟನೆಗಳು ಸೇರಿದಂತೆ ಕರಾವಳಿಯ ಸಂಘಟನೆಗಳು ಮೈಸೂರು ಬ್ಯಾಂಕ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದವು. 
 
ಕಂಬಳಕ್ಕೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಅಗತ್ಯ ಬಿದ್ದರೆ ಕಂಬಳ ಆಚರಣೆಗೆ ಸುಗ್ರೀವಾಜ್ಞೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ