ಕಂಬಾಲಪಲ್ಲಿಯಲ್ಲಿ ಏಳು ಜನ ದಲಿತರನ್ನು ಅವರ ಮನೆಯಲ್ಲಿಯೇ ಕಟ್ಟಿಹಾಕಿ ಸವರ್ಣೀಯರು ಮನೆಗೆ ಪೆಟ್ರೋಲ್ ಸುರಿದು ಜೀವಂತ ದಹಿಸಿದ್ದರು. ಕೋಲಾರದ ಜೆಎಂಎಫ್ಸಿ ನ್ಯಾಯಾಲಯ ಆರೋಪಿಗಳನ್ನು ಖುಲಾಸೆ ಮಾಡಿ ಆದೇಶ ನೀಡಿತ್ತು. ಸರ್ಕಾರ ಈ ತೀರ್ಪಿನ ವಿರುದ್ದ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಪ್ರಮುಖವಾಗಿ ಆರೋಪಿಗಳನ್ನು ಗುರುತಿಸುವುದಕ್ಕೆ ಸಾಕ್ಷ್ಯಾಧಾರಗಳ ಕೊರತೆಯಿಂದ ಹೈಕೋರ್ಟ್ 32 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದೆ.