ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎನ್ನಲಾಗಿದೆ.
ನಗರದಲ್ಲಿ ಪ್ರಭಾವಿ ಬಿಲ್ಡರ್ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಐಟಿ ಕಂಪೆನಿ, ಮಾಲ್ಗಳು ಹಾಗೂ ಟೆಕ್ ಪಾರ್ಕ್ ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಸರಕಾರ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ ಮಾಡುತ್ತಿದೆ ಎಂದು ಬೆಂಗಳೂರಿನ ಜನತೆ ಆರೋಪಿಸುತ್ತಿದ್ದಾರೆ.