ಮಹಾರಾಷ್ಟ್ರ ಸಿಎಂಗೆ ಬೆಂಕಿ ಹಚ್ಚಿದ ಕನ್ನಡಿಗರು!

ಶನಿವಾರ, 4 ಜನವರಿ 2020 (17:51 IST)

ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಸಿಎಂಗೆ ವೀರ ಕನ್ನಡಿಗರ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಕನ್ನಡ ಹಾಗೂ ಕರ್ನಾಟಕದ ವಿರುದ್ಧವಾಗಿರೋ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿಲುವು ಖಂಡಿಸಿ ವೀರ ಕನ್ನಡಿಗರ ಸೇನೆ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ಪ್ರತೀಕಾರ ತೀರಿಸಿಕೊಂಡಿದ್ದಾರೆ.

ಕಲಬುರಗಿ ಡಿಸಿ ಕಚೇರಿ ಮುಂಭಾಗದಲ್ಲಿ ಮಹಾರಾಷ್ಟ್ರ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಲಾಗಿದೆ.

ಅಸಂಬದ್ಧ ಹೇಳಿಕೆ ನೀಡೋದನ್ನು ಠಾಕ್ರೆ ಕೈ ಬಿಡಬೇಕು. ಮಹಾರಾಷ್ಟ್ರದಲ್ಲಿರೋ ಕನ್ನಡಿಗರಿಗೆ ರಕ್ಷಣೆ ಕೊಡಬೇಕೆಂದು ಒತ್ತಾಯಿಸಿದ್ರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ