ಕರವೇ ನಾರಾಯಣಗೌಡ ಮತ್ತೆ ಅರೆಸ್ಟ್‌

geetha

ಮಂಗಳವಾರ, 9 ಜನವರಿ 2024 (14:46 IST)
ಬೆಂಗಳೂರು-ಕನ್ನಡ ನಾಮಫಲಕ ಹೋರಾಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿನಿಂದ ಬಿಡುಗಡೆಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮತ್ತೆ ಅರೆಸ್ಟ್‌ ಆಗಿದ್ದಾರೆ. ಶನಿವಾರ ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ನಾರಾಯಣ ಗೌಡ ಬಿಡುಗಡೆಯಾಗಿದ್ದರು. ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣ ಗೌಡರನ್ನು ಜೈಲಿನ ಮೊದಲ ಗೇಟ್‌ನಲ್ಲೇ ವಶಕ್ಕೆ ಪಡೆದಿದ್ದಾರೆ. 2017ರ ಸಾರ್ವಜನಿಕ ಆಸ್ತಿನಾಶ, ಅಧಿಕಾರಿಗಳಿಗೆ ಅಡ್ಡಿ ಪ್ರಕರಣದಲ್ಲಿ ಮತ್ತೆ ನಾರಾಯಣ ಗೌಡರನ್ನು ಬಂಧಿಸಲಾಗಿದೆ. ಪೊಲೀಸರು ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ