ಕಾರ್ಕಳ: ನಕಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಅರೆಸ್ಟ್
ಕ್ರಿಶ್ ಆರ್ಟ್ ವರ್ಲ್ಡ್ನ ಕೃಷ್ಣ ನಾಯ್ಕ್ಗೆ ಮೂರ್ತಿ ನಿರ್ಮಾಣದ ಹೊಣೆ ಹೊರಿಸಲಾಗಿತ್ತು. ಆದರೆ ಶಿಲ್ಪಿ ಕೃಷ್ಣ ನಾಯಕ್ ಅವರು ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ಆರೋಪ ಕೇಳಿಬಂದಿತ್ತು.
ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ, ಕಾರ್ಕಳ ಠಾಣೆ ಪೊಲೀಸರು ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಬಂಧಿಸಿದ್ದಾರೆ.