ಕರ್ನಾಟಕ ಬಿಜೆಪಿಗೆ ಒಳ್ಳೆಯ ನಾಯಕತ್ವವಿದೆ: ಸದಾನಂದಗೌಡ

ಶನಿವಾರ, 2 ಜುಲೈ 2016 (15:44 IST)
ಬಿಜೆಪಿ ಹೈಕಮಾಂಡ್ ಕರ್ನಾಟಕ ರಾಜ್ಯಕ್ಕೆ ಒಳ್ಳೆಯ ನಾಯಕತ್ವ ನೀಡಿದೆ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ  ಹೇಳಿದ್ದಾರೆ.
 
ಬಿಜೆಪಿ ಪಕ್ಷಕ್ಕೆ ಇನ್ನೂ ಎರಡು ವರ್ಷಗಳ ಕಾಲವಕಾಶವಿದೆ.ಎರಡು ವರ್ಷಗಳಲ್ಲಿ ಅವಧಿಯಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗುರುತಿಸಿ ಜನರಿಗೆ ತಲುಪಿಸುವುದಲ್ಲದೇ ಜನಪರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಬಿಜೆಪಿ ಪಕ್ಷಕ್ಕೆ ಇನ್ನೂ ಎರಡು ವರ್ಷಗಳ ಕಾಲವಕಾಶವಿದೆ.ಎರಡು ವರ್ಷಗಳಲ್ಲಿ ಅವಧಿಯಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗುರುತಿಸಿ ಜನರಿಗೆ ತಲುಪಿಸುವುದಲ್ಲದೇ ಜನಪರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಿನ್ನೆ ಡಿ.ವಿ ಸದಾನಂದಗೌಡ ಹೇಳಿದ್ದರು.
 
ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಭ್ರಷ್ಟಾಚಾರರಹಿತ ಅಡಳಿತಕ್ಕೆ ಹೆಸರುವಾಸಿಯಾಗಿದೆ. ಮೋದಿ ಸರಕಾರದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನತೆಯ ಮುಂದಿಟ್ಟು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿಯಾಗಿದೆ ಎಂದು ಹೇಳಿಕೆ ನೀಡಿದ್ದರು.

 ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ