ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಟ್ವೀಟರ್ ತಿರುಗೇಟು
ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಪಕ್ಷಕ್ಕೆ ಸೆಳೆಯಲು ಯತ್ನಿಸಿಯೂ ಇಲ್ಲ ಎಂದು ಬಿಜೆಪಿ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದೆ. ಆ ಮೂಲಕ ತನ್ನ ಪಕ್ಷದ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದೆ.
ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಿಂಗ್ ಪಿನ್ ಹಸ್ತಕ್ಷೇಪ ಹಾಗೂ ಭ್ರಷ್ಟಾಚಾರದಲ್ಲಿ ನಿರತರಾಗಿರುವ ಕೊಳಕು ಆಡಳಿತದಿಂದಾಗಿ ನಿಮ್ಮ ಶಾಸಕರೇ ಬೇಸತ್ತಿದ್ದಾರೆ. ಧರ್ಮ ಒಡೆಯಲು ಹೋಗಿ ಜನತೆಯಿಂದ ಮೂಲೆಗೆ ತಳ್ಳಲ್ಪಟ್ಟಿರುವ ನಿಮಗೆ ನಮ್ಮನ್ನು ಕೋಮುವಾದಿಯೆಂದು ಕರೆಯುವ ನೈತಿಕತೆಯಿಲ್ಲ ಎಂದು ನೇರವಾಗಿ ಸಿದ್ದರಾಮಯ್ಯನವರ ಟ್ವೀಟ್ ಉಲ್ಲೇಖಿಸಿಯೇ ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆ.