ಬಸ್ ತಡೆಯುತ್ತೇವೆ, ಹೋಟೆಲ್ ಮುಚ್ಚಿಸುತ್ತೇವೆ: ವಾಟಾಳ್ ನಾಗರಾಜ್

ಭಾನುವಾರ, 11 ಜೂನ್ 2017 (17:14 IST)
ನಾಳೆ ಕರ್ನಾಟಕ ಬಂದ್ ನಡೆಸಿಯೇ ತೀರುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಬಯಲುಸೀಮೆಗೆ ನೀರಾವರಿ, ರೈತರ ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಉದ್ದೇಶಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಯಲು ಸೀಮೆಗೆ ಭಯಂಕರ ನೀರಿನ ಸಮಸ್ಯೆ ಇದೆ, ಬರವಿದ್ದರೂ ರೈತರ ಸಾಲಮನ್ನಾ ಮಾಡಿಲ್ಲ, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೊಳಿಸುತ್ತಿಲ್ಲ, ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ದಾಳಿ ನಡೆಯುತ್ತಿದೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಜೈಲಿಗೆ ಹೋದರೂ ಸರಿ ಬಸ್`ಗಳನ್ನ ತಡೆಯುತ್ತೇವೆ, ಹೋಟೆಲ್`ಗಳನ್ನ ಮುಚ್ಚಿಸುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಮಧ್ಯೆ, ಕರ್ನಾಟಕ ಬಂದ್ ವೇಳೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲ ಆಗುವುದಿಲ್ಲ ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ವೆಬ್ದುನಿಯಾವನ್ನು ಓದಿ