ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೀಗ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಸಮುದಾಯಗಳು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿವೆ ಎನ್ನುವುದಕ್ಕೆ ಬಿಬಿಎಂಪಿ ಪಾಲಿಕೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಪರಮೇಶ್ವರ್ ಪರೋಕ್ಷವಾಗಿ ಟೀಕಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮನ್ನು ತಾವು ಅಹಿಂದದ ನಾಯಕರು ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದರು. ಆದರೆ, ಇತರ ಸಮುದಾಯಗಳನ್ನು ನಿರ್ಲಕ್ಷಿಸಿ ಕೇವಲ ಕುರುಬ ಸಮುದಾಯದ ಜನತೆಗೆ ಹೆಚ್ಚಿನ ಅವಕಾಶ ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ ಎಂದು ಹೇಳಿದ್ದಾರೆ.