ಅನ್ನಭಾಗ್ಯ ಹಣದ ಬದಲು ಅಕ್ಕಿ ಎಂದಿದ್ದ ಸರ್ಕಾರ: ಈಗ ಅಕ್ಕಿಯೂ ಇಲ್ಲ, ಹಣವೂ ಇಲ್ಲ
ಮಾರ್ಚ್ 11 ರಿಂದ ಪಡಿತರ ವಿತರಣೆ ಆರಂಭವಾಗಿತ್ತು .ಆದರೆ ಎರಡೇ ದಿನಗಳಲ್ಲಿ ಎಲ್ಲವೂ ಖಾಲಿಯಾಗಿದೆ. ಈಗ 15 ಕೆ.ಜಿ. ಅಕ್ಕಿಯೂ ಇಲ್ಲ, ಹಣವೂ ಇಲ್ಲ ಎಂಬ ಪರಿಸ್ಥಿತಿ ಫಲಾನುಭವಿಗಳದ್ದಾಗಿದೆ.
ಬೆಂಗಳೂರು, ದಾವಣಗೆರೆ, ಯಾದಗಿರಿ, ಶಿವಮೊಗ್ಗ, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಈಗ ಫಲಾನುಭವಿಗಳಿಗೆ ಅಕ್ಕಿ ಸಿಗುತ್ತಿಲ್ಲ. ಕೇಳಿದರೆ ಸ್ಟಾಕ್ ಖಾಲಿಯಾಗಿದೆ ಎಂಬ ಉತ್ತರ ಬರುತ್ತಿದೆ. ಇದಕ್ಕೆ ಸರ್ಕಾರ ಶೀಘ್ರವೇ ಸ್ಪಂದಿಸಬೇಕಿದೆ.