ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಸಂಪೂರ್ಣವಾಗಿ ಬರಿದಾದ ಮೇಲೆ ರಾಜ್ಯ ಸರಕಾರ ಎಚ್ಚೆಕುಕೊಂಡಿದ್ದು, ಕಾವೇರಿ ವಿಚಾರದಲ್ಲಿ ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ಗೆ ಗೇಟ್ಪಾಸ್ ನೀಡಲು ಚಿಂತಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಕಾವೇರಿ ವಿಚಾರದಲ್ಲಿ ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ ಅವರನ್ನು ಬದಲಾಯಿಸುವಂತೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು. ಆದರೆ, ಈ ಕುರಿತು ಮೊದಲ ಬಾರಿ ರಾಜ್ಯ ಸರಕಾರ ತುಟಿ ಬಿಚ್ಚಿದೆ. ಕಾವೇರಿ ವಿಚಾರದಲ್ಲಿ ರಾಜ್ಯದ ಪರ ವಾದಿಸುವ ನಾರಿಮನ್ ಅವರನ್ನು ಬದಲಾಯಿಸುವುದು ಅಗತ್ಯವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.