Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

Krishnaveni K

ಬುಧವಾರ, 13 ಆಗಸ್ಟ್ 2025 (08:33 IST)
ಬೆಂಗಳೂರು: ರಾಜ್ಯದ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇಂದಿನವರೆಗೂ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಅಪರಾಹ್ನದ ನಂತರ ಮತ್ತು ರಾತ್ರಿ ಮಳೆಯಾಗುತ್ತಿದೆ. ಇದರಿಂದಾಗಿ ಜನ ಸಂಜೆ ಕಚೇರಿ ಮುಗಿಸಿ ಮನೆಗೆ ತೆರಳುವವರು ಪರದಾಡುವಂತಾಗಿದೆ. ಇಂದೂ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಆಗಸ್ಟ್ 16 ವರೆಗೂ ಬೆಂಗಳೂರಿಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ.

ಈ ವಾರವಿಡೀ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆಗಸ್ಟ್ 15 ರ ನಂತರ ಮಳೆ ಇನ್ನಷ್ಟು ಬಿರುಸಾಗುವ ಸಾಧ್ಯತೆಯಿದೆ.

ಉಳಿದಂತೆ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೀದರ್, ಬಳ್ಳಾರಿ, ಚಿತ್ರದುರ್ಗ, ಗದಗ, ಬೀದರ್, ಕೊಪ್ಪಳ, ಹಾವೇರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲೂ ಭಾರೀ ಮಳೆಯ ಸಂಭವವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ