ಬೆಂಗಳೂರು: ಮೇಕೆದಾಟು ಬಳಿ ಜಲವಿದ್ಯುತ್ ಯೋಜನೆಯನ್ನು ಆರಂಭಿಸುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಈ ಕುರಿತು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿರುವುದರಿಂದ ತಮಿಳುನಾಡು ಸರ್ಕಾರದ ವಿರುದ್ದ ಕಾನೂನು ಹೋರಾಟ ತಪ್ಪಿಸಲು ಯೋಜನೆಯನ್ನು ಕೈಬಿಡಲಾಗಿದೆ ಎಂದು ಡಿಕೆಶಿ ಹೇಳಿದರು.