ಬೆಂಗಳೂರು: ಕಳೆದ ವಾರವಿಡೀ ವರುಣ ಕೊಂಚ ಮಟ್ಟಿಗೆ ಬಿಡುವು ಮಾಡಿಕೊಂಡಿದ್ದ. ಆದರೆ ಇಂದಿನಿಂದ ಮತ್ತೆ ಮಳೆ ಅಬ್ಬರ ಶುರುವಾಗಲಿದೆ. ಈ ಜಿಲ್ಲೆಗಳಿಗೆ ಇಂದಿನಿಂದ ಮಳೆ ಅಬ್ಬರಿಸಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಈ ಬಾರಿ ಬೇಗನೇ ಮುಂಗಾರು ಆರಂಭವಾಗಿತ್ತು. ಹೀಗಾಗಿ ಭಾರೀ ಮಳೆ ನಿರೀಕ್ಷಿಸಲಾಗಿತ್ತು. ಅದರಂತೆ ಮೊದಲ ವಾರ ಭಾರೀ ಮಳೆಯಾಗಿ ಎಲ್ಲೆಡೆ ಪ್ರವಾಹ ಸ್ಥಿತಿಯಾಗಿತ್ತು. ಆದರೆ ಅದಾದ ಬಳಿಕ ಕಳೆದ ಒಂದು ವಾರದಿಂದ ಮಳೆ ಕೊಂಚ ಕಡಿಮೆಯಾಗಿತ್ತು.
ಆದರೆ ಈಗ ಮತ್ತೆ ಮುಂಗಾರು ಚುರುಕುಗೊಳ್ಳಲಿದೆ. ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ಜೂನ್ 11 ರಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ವರದಿಗಳು ಹೇಳುತ್ತಿವೆ. ನಿನ್ನೆಯೇ ಕೆಲವೆಡೆ ತುಂತುರು ಮಳೆ, ಮೋಡ ಕವಿದ ವಾತಾವರಣವಿತ್ತು. ಇಂದು ಮಳೆ ಇನ್ನಷ್ಟು ತೀವ್ರಗೊಳ್ಳಲಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ, ಕೊಡಗು, ಉಡುಪಿ, ಕೋಲಾರ, ಹಾಸನ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ರಾಯಚೂರು, ಹಾವೇರಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಿಜಾಪುರ, ಚಿತ್ರದುರ್ಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಉಳಿದಂತೆ ಹಾಸನ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.