ಬೆಂಗಳೂರು: ಕರ್ನಾಟಕದಲ್ಲಿ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ವಿಪರೀತ ಏರಿಕೆಯಾದರೂ ಇದರ ನಡುವೆಯೂ ಸಣ್ಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾರವಿಡೀ ವಿಪರೀತ ಬಿಸಿಲು, ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಈ ವಾರ ಅಷ್ಟೊಂದು ಮಳೆಯಾಗಿರಲಿಲ್ಲ. ವಾರಂತ್ಯಕ್ಕೂ ತಾಪಮಾನ ವಿಪರೀತ ಏರಿಕೆಯಾಗಲಿದೆ. ಆದರೆ ಇದರ ನಡುವೆಯೂ ತುಂತುರು ಮಳೆಯ ಸಾಧ್ಯತೆಯಿದೆ.
ರಾಯಚೂರು, ಕಲಬುರಗಿ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ದಾಟಲಿದೆ. ಹಾಗಿದ್ದರೂ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ತುಂತುರು ಮಳೆ ಅಥವಾ ಮೋಡ ಕವಿದ ವಾತಾವರಣ ಸಾಧ್ಯತೆಯೂ ಇದೆ ಎನ್ನುತ್ತಿದೆ ಹವಾಮಾನ ವರದಿಗಳು.
ಇದಲ್ಲದೆ ದಕ್ಷಿಣ ಕನ್ನಡ, ತುಮಕೂರು, ಕೊಪ್ಪಳ, ಧಾರವಾಡ, ಬೀದರ್, ಗದಗ, ಬೆಳಗಾವಿ ಜಿಲ್ಲೆಗಳಲ್ಲೂ ಇಂದು ಅಥವಾ ನಾಳೆ ತುಂತುರು ಮಳೆಯ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಉರಿಬಿಸಿಲು ಮುಂದುವರಿಯಲಿದೆ. ಇಂದು ಮತ್ತು ನಾಳೆ ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 35-36 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವುದು.