ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲು ಹೆಚ್ಚಾಗುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಬಿಸಿಲು, ಯಾವ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ದಕ್ಷಿಣ ಕನ್ನಡ, ಚಿಕ್ಕಮಗಳೂರಿನ ಕೆಲವು ಕಡೆ ಆಲಿಕಲ್ಲು ಮಳೆಯಾದ ಘಟನೆಗಳೂ ಕಂಡುಬಂದಿದ್ದವು. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಉರಿಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ವಿಶೇಷವಾಗಿ ರಾಯಚೂರು, ಬಳ್ಳಾರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸು ತಲುಪಲಿದೆ.
ಹವಾಮಾನ ವರದಿಗಳ ಪ್ರಕಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಲ್ಲೆಗಳಲ್ಲಿ ಈ ವಾರ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.