ಕಾರ್ತಿ ಚಿದಂಬರಂಗೆ ಎದೆನೋವು… ವಿರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಶನಿವಾರ, 16 ಸೆಪ್ಟಂಬರ್ 2017 (21:02 IST)
ಕೊಡಗು: ಕಾಂಗ್ರೆಸ್ ಪಕ್ಷದ ನಾಯಕ, ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ತಿ ಚಿದಂಬರಂ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದ ಸಮೀಪವಿರುವ ತಮ್ಮ ಸ್ನೇಹಿತನ ಎಸ್ಟೇಟ್ ಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಕಾರ್ತಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವಿರಾಜಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಕಾರ್ತಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಸುಮಾರು 2 ಗಂಟೆ ಕಾಲ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಕಾರ್ತಿ ಆರೋಗ್ಯವಾಗಿದ್ದು, ಚೆನ್ನೈಗೆ ವಾಪಸಾಗಿದ್ದಾರೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ