ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ತಲೆತಪ್ಪಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮೀಷನರ್ ಎಂ.ಎನ್. ರೆಡ್ಡಿ ಗುರುವಾರ ತಿಳಿಸಿದ್ದಾರೆ. ಅವರನ್ನು ಹಿಡಿಯಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಎಲ್ಲಾ ವಿಮಾನನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಲುಕ್ ಔಟ್ ನೋಟಿಸ್ ನೀಡಲಾಗಿದೆ. ಎಸಿಪಿ ಓಂಕಾರಯ್ಯ ನೇತೃತ್ವದಲ್ಲಿ ರಚಿಸಲಾದ ತಂಡ ಕಾರ್ತಿಕ್ ಗೌಡರನ್ನು ಹುಡುಕುತ್ತಿದೆ.
ಏತನ್ಮಧ್ಯೆ, ನಗರ ಸಿವಿಲ್ ಕೋರ್ಟ್ ಶುಕ್ರವಾರಕ್ಕೆ ಪ್ರಕರಣವನ್ನು ಮುಂದೂಡಿತು.ಕಾರ್ತಿಕ ಗೌಡ ಪರವಾಗಿ ವಕೀಲ ಬಿ.ವಿ. ಆಚಾರ್ಯ ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾದಿಸಿದರು. ಗುರುವಾರ ಅವರ ವಾದಮಂಡನೆ ಮುಗಿದಿದ್ದರಿಂದ ಪಬ್ಲಿಕ್ ಪ್ರಾಸಿಕ್ಯೂಟರ್ ತಮ್ಮ ವಾದ ಮಂಡಿಸಲಿದ್ದಾರೆ.