ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್

ಶನಿವಾರ, 13 ಮೇ 2023 (17:12 IST)
ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು,ಕರ್ನಾಟಕ ಫಲಿತಾಂಶ ಬಂದಿದೆ.ಇಡೀ ರಾಜ್ಯದ ಜನತೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಆಗಿರೋರಿಗೆ ಅಭಿನಂದನೆ ಸಲ್ಲಿಸ್ತೇನೆ.ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸ್ತೇನೆ.ಜನತಾ ಆಶಿರ್ವಾದ ಸ್ವಾಗತಿಸ್ತೇನೆ.ರಾಜ್ಯ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ.ವಿರೋಧಕ್ಕೆ ವಿರೋಧ ಮಾಡಿದ್ದೇವೆ.ಮತದಾರರಿಗೆ ಅಭಿನಂದನೆ ಸಲ್ಲಿಸ್ತೇನೆ.ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದಾರೆ.ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ.ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ.ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷನಾಗಿ ನಾನು ಹೊಣೆ ಹೊರ್ತೀನಿ‌ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
 
ಇಂದು ಬಂದಿರೋ ಫಲಿತಾಂಶ ನಾನು ಸ್ವಾಗತಿಸ್ತೇನೆ.ಮೋದಿ ರ್ಯಾಲಿ ವಿಚಾರವಾಗಿಯೂ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು,ಕೆಲವೆಡೆ ಜನರು ಖುಷಿ ಆಗಿದ್ದಾರೆ.ತುಂಬಾ ಕಡೆ ಗೆದ್ದಿದ್ದೇವೆ.ದೊಡ್ಡ ಬಳ್ಳಾಪುರದಲ್ಲಿ ಗೆದ್ದಿದ್ದೇವೆ.ಸೋತಿರೋ ಕಡೆ ಯಾಕೆ ಸೋತಿದ್ದೇವೆ ಅಂತ ಪರಾಮರ್ಶೆ ಮಾಡ್ತೀವಿ.ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡ್ತೀವಿ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ