ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು!

ಭಾನುವಾರ, 24 ಸೆಪ್ಟಂಬರ್ 2023 (16:06 IST)
ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ವಿಶ್ವೇಶ್ವರ ಪ್ರತಿಮೆ ಆವರಣದಲ್ಲಿ ವಿವಿಧ ಸಂಘಟನೆಗಳು ಧರಣಿ ನಡೆಸಿದೆ. ರೈತ ಹಿತ ರಕ್ಷಣಾ ಸಮಿತಿಯ ಸದಸ್ಯರು ಸಂಜಯ್ ವೃತ್ತದಲ್ಲಿ ಪ್ರೊಟೆಸ್ಟ್ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಂಡ್ಯ ಬಂದ್‌ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, ಕಾವೇರಿ ವಿಚಾರವಾಗಿ ಕುಮಾರಣ್ಣ ಮಂಡ್ಯಗೆ ಭೇಟಿ ನೀಡಿದ್ರು. ನಮ್ಮ ರೈತರಿಗೆ ನ್ಯಾಯ ಒದಗಿಸೋ ನಿಟ್ಟಿನಲ್ಲಿ ದೇವೇಗೌಡರ ಕುಟುಂಬ ಎಂದೂ ಜೊತೆಯಲ್ಲಿ ಇರುತ್ತೆ ಎಂದು ಭರವಸೆ ನೀಡಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ