ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ; ಗುಂಡೇಟಿಗೆ ಬಲಿಯಾದವರು ಅಮಾಯಕರೆಂದ ಶಾಸಕ

ಗುರುವಾರ, 13 ಆಗಸ್ಟ್ 2020 (11:23 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತವರಿಗೆ ಶಾಸಕ ಜಮೀರ್ ಅಹಮ್ಮದ್ ಸರ್ಟಿಫಿಕೇಟ್  ನೀಡಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದವರನ್ನು ಶೂಟ್ ಮಾಡಲಾಗಿತ್ತು. ಆ ವೇಳೆ ಇಬ್ಬರು ಗೋಲಿಬಾರ್ ಗೆ ಬಲಿಯಾಗಿದ್ದಾರೆ. ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಶಾಸಕ ಜಮೀರ್ ಅಹ್ಮದ್ ಭಾಗಿಯಾಗಿದ್ದರು.

ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ , ಗುಂಡೇಟಿಗೆ ಬಲಿಯಾದವರು ಅಮಾಯಕರು. ಗಲಭೆ ಮಾಡಿದ್ದು ಯಾರೋ? ಬಲಿಯಾಗಿದ್ದು ಇನ್ಯಾರೋ? ಎಂದು ಬೇಸರ ಹೊರಹಾಕಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ