ಸಿಎಂ ಸಂಸದೀಯ ಕಾರ್ಯದರ್ಶಿ ತುಕಾರಾಂ ವಿರುದ್ದ ಕಿಕ್ ಬ್ಯಾಕ್ ಆರೋಪ

ಮಂಗಳವಾರ, 26 ಡಿಸೆಂಬರ್ 2017 (09:17 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕೋಪಯೋಗಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿರುವ ಶಾಸಕ ತುಕಾರಾಂ ವಿರುದ್ಧ 6 ಕೋಟಿ ರೂಪಾಯಿ ಕಿಕ್‍ಬ್ಯಾಕ್ ಪಡೆದಿರುವ ಆರೋಪ ಕೇಳಿಬಂದಿದೆ.

ಸಂಡೂರು ಪಟ್ಟಣದಲ್ಲಿನ ಸೈಯೋರ ಪ್ರೆಟೋಲ್ ಬಂಕ್‍ನಿಂದ ಧರ್ಮಾಪುರದವರೆಗೆ ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ, ಡಾಂಬರೀಕರಣ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆಯಿಂದ 26 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆದ್ರೆ 80 ಅಡಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ಪಡೆದು ಕೇವಲ 60 ಅಡಿ ಮಾತ್ರ ರಸ್ತೆ ಅಗಲೀಕರಣ ಮಾಡಲಾಗಿದೆ.

ಶಾಸಕ ತುಕಾರಾಂ ಅವರು ತಮ್ಮ ಪಿಎ ಹಿರೇಮಠ್ ಅವರ ಹೆಸರಿನಲ್ಲಿ ಗುತ್ತಿಗೆದಾರರಿಂದ 6 ಕೋಟಿ ಕಿಕ್‍ಬ್ಯಾಕ್ ಪಡೆದಿದ್ದಾರೆ ಎಂದು ಸ್ಥಳೀಯ ಹೋರಾಟಗಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ