ತಾಯಿ ಸಣ್ಣನಿಂಗಮ್ಮಗೆ ಹಲವು ಬಾರಿ ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಒತ್ತಡ ಹೇರಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ದಾನಾಪುರದಲ್ಲಿ 10 ನೇ ತರಗತಿಯಲ್ಲಿ ಓದುತ್ತಿರುವ ಮಲ್ಲಮ್ಮ ಬಾಗ್ಲಾಪುರ್ ಜುಲೈ 12 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾಳೆ. ಮಾಹಿತಿ ತಿಳಿದ ಕೊಪ್ಪಳ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ಬಾಲಕಿಗೆ ಆಶ್ವಾಸನೆ ನೀಡಿ ನಿರಶನ ಅಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರತಿಯೊಂದು ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಪ್ರಚಾರ ಕಾರ್ಯ ಕೈಗೊಳ್ಳಲು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡುತ್ತಿದ್ದೆ. ಆದರೆ, ದಾನಾಪುರ್ಗೆ ಬಂದಾಗ ಹೊಸ ಧನಾತ್ಮಕ ಅನುಭವ ಎದುರಾಯಿತು. ಶೌಚಾಲಯ ನಿರ್ಮಾಣಕ್ಕಾಗಿ ಬಾಲಕಿ ನಿರಶನ ನಡೆಸಿದ್ದಾಳೆ ಎನ್ನುವುದು ತಿಳಿಯಿತು. ಆದ್ದರಿಂದ ಅಲ್ಲಿಗೆ ತೆರಳಿ ಬಾಲಕಿ ಮನವೊಲಿಸಿ ಶೌಚಾಲಯ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯಿತಿಯಿಂದ ಹಣಕಾಸಿನ ನೆರವು ನೀಡಲಾಯಿತು ಎಂದು ತಿಳಿಸಿದ್ದಾರೆ.