ಉತ್ತರಪ್ರದೇಶದಂತೆ ರಾಜ್ಯದಲ್ಲಿಯೂ ಅತ್ಯಾಚಾರಗಳ ಸರಣಿ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ದಿನೇ ದಿನೇ ಹೊಸ ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೊಲದ ಕೆಲಸ ಮಾಡಿಕೊಂಡು ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಯೊಬ್ಬಳನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಿರಾಳಕಲ್ಗುಡಿ ಕ್ಯಾಂಪ್ನಲ್ಲಿ ನಡೆದ ಈ ಅಮಾನುಷ ಘಟನೆಯಲ್ಲಿ ಆರೋಪಿ ಮುದುಕಪ್ಪ ನವಳಿ ಎಂಬಾತ ಹೊಲದಿಂದ ಮನೆಯ ಕಡೆ ಹೊರಟಿದ್ದ ಹದಿಹರೆಯದ ಬಾಲಕಿಯ ಮೇಲೆ ಎರಗಿ ರೇಪ್ ಎಸಗಿದ್ದಾನೆ.
ಕುಕೃತ್ಯದ ನಡೆದ ನಂತರ ಮನೆಗೆ ಬಂದ ಹುಡುಗಿ ಎಲ್ಲವನ್ನು ತನ್ನ ಪಾಲಕರಿಗೆ ತಿಳಿಸಿದ್ದಾಳೆ. ತಕ್ಷಣ ಪೋಲಿಸರಿಗೆ ದೂರು ನೀಡಲಾಯಿತು. ಪರಾರಿಯಾಗಿದ್ದ ಆರೋಪಿಯನ್ನು ಕೇವಲ 2 ಘಂಟೆಯಲ್ಲಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದ್ದು, ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.