ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಮೂರನೇ ಅಲೆ ಹಾಗೂ ಒಮಿಕ್ರನ್ ಕುರಿತು ನಿರ್ಲಕ್ಷ್ಯ ಬೇಡ. ಬದಲಿಗೆ ಎಲ್ಲರೂ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜತೆ ನಡೆದ ಮುಖ್ಯ ಮಂತ್ರಿಗಳ ಸಭೆಯಲ್ಲಿ ಕೂಡ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚಿಸಿದ್ದಾರೆ. ಜನರಿಗೆ ಆರ್ಥಿಕ ನಷ್ಟವಾಗದಂತೆ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಲಾಕ್ ಡೌನ್ ನಿಂದ ಸೋಂಕು ನಿಯಂತ್ರಣವಾಗುವುದಿಲ್ಲ. ಎರಡು ಬಾರಿಯ ಲಾಕ್ ಡೌನ್ ಈಗಾಗಲೇ ಜನರಿಗೆ ಸಮಸ್ಯೆ ಆಗಿದೆ. ಹಾಗಾಗಿ ಲಾಕ್ ಡೌನ್ ಇಲ್ಲದೆ ಇತರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.