ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ಗೆ ತುಮಕೂರು ಕ್ಷೇತ್ರ ಬಿಟ್ಟುಕೊಡಲು ಸಿದ್ದ– ಶಾಸಕ

ಶನಿವಾರ, 30 ಡಿಸೆಂಬರ್ 2017 (12:50 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ತುಮಕೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ಕ್ಷೇತ್ರವನ್ನು ಬಿಟ್ಟು ಕೊಡಲು ನಾನು ಸಿದ್ದವಾಗಿದ್ದೇನೆ ಎಂದು ಶಾಸಕ ರಫೀಕ್ ಅಹಮ್ಮದ್ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಮೇಶ್ವರ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟು ಅವರ ಗೆಲುವಿಗೆ ಶ್ರಮಿಸುತ್ತೇನೆ. ಅವರು ತುಮಕೂರು ಕ್ಷೇತ್ರವನ್ನು ಪ್ರತಿನಿಧಿಸದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷಡ ಆಡಳಿತದಲ್ಲಿ ತುಮಕೂರು ಬಹಳಷ್ಟು ಅಭಿವೃದ್ಧಿ ಹೊಂದಿದೆ. ಪಾಲಿಕೆ ವ್ಯಾಪ್ತಿಯ 35 ವಾರ್ಡ್‍ಗಳು ಸಮಗ್ರವಾಗಿ ಅಭಿವೃದ್ದಿ ಹೊಂದಿವೆ. ಮೂಲ ಸೌಕರ್ಯಗಳ ಕೊರತೆಯನ್ನು ಗಣನೀಯವಾಗಿ ನೀಗಿಸಲಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ