2011ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್ಸಿ) ನೇಮಕಗೊಂಡಿದ್ದ 362 ಜನರಲ್ಲಿ ದೇವರಾಜ್ ಹಾಗೂ ಇತರ 159 ಜನರು ಈ ಮೇಲ್ಮನವಿ ಸಲ್ಲಿಸಿದ್ದಾರೆ. ಬುಧವಾರ ವಿಚಾರಣೆ ನಡೆಸಿದ ನ್ಯಾಯಪೀಠ, ಸರ್ಕಾರ ಸೆಪ್ಟೆಂಬರ್ 19ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ.
ಪ್ರೊಬೇಷನರಿ ಅಧಿಕಾರಿಗಳ ಪಟ್ಟಿಯನ್ನು ರಾಜ್ಯ ಸರ್ಕಾರವು 2014ರ ಆಗಸ್ಟ್ 14ರಂದು ಹಿಂದಕ್ಕೆ ಪಡೆದಿದೆ. ಇದಕ್ಕೆ ಸೂಕ್ತ ಕಾರಣ ನೀಡಿಲ್ಲ. ಆದ್ದರಿಂದ ಇದು ಸಂವಿಧಾನದ 16ನೇ ವಿಧಿಯ (ಸಾರ್ವಜನಿಕ ಉದ್ಯೋಗ ಹಕ್ಕು) ಸ್ಪಷ್ಟ ಉಲ್ಲಂಘನೆಯಾಗಿದೆ. ಇದರಿಂದಾಗಿ ಕೆಪಿಎಸ್ಸಿ ಪರೀಕ್ಷೆ ಎದುರಿಸಿದ್ದ ಪ್ರಾಮಾಣಿಕ ಮತ್ತು ಅರ್ಹತೆ ಆಧಾರದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ.