2011ರ ಕೆಪಿಎಸ್ಸಿ ನೇಮಕಾತಿ ರದ್ದತಿ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೆಪಿಎಸ್ಸಿ ಅಭ್ಯರ್ಥಿಗಳು ಇಂದು ಪ್ರತಿಭಟನೆ ಅಂತ್ಯಗೊಳಿಸಲಿದ್ದು, ಇಂದು ಅಥವಾ ನಾಳೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಸುಮಾರು 31 ದಿನಗಳಿಂದ ಕೆಪಿಎಸ್ಸಿ ಅಭ್ಯರ್ಥಿಗಳಿಂದ ಉಪವಾಸ ಸತ್ಯಾಗ್ರಹ ಮುಂತಾದ ಹೋರಾಟ ಯಾವುದೇ ಫಲ ನೀಡಿಲ್ಲ. ಜೆಡಿಎಸ್ ಮುಖಂಡ ಕುಮಾರಸ್ವಾಮಿ, ವಿವಿಧ ಸಂಘ, ಸಂಸ್ಥೆಗಳು ಇವರ ಹೋರಾಟಕ್ಕೆ ಕೈಗೂಡಿಸಿದ್ದವು.