ಕೆ.ಆರ್.ಪೇಟೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನಲೆ; ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲ ಯಾರಿಗೆ?

ಶನಿವಾರ, 2 ನವೆಂಬರ್ 2019 (11:11 IST)
ಮಂಡ್ಯ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನಲೆ ಈ ಬೈ ಎಲೆಕ್ಷನ್ ನಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲ ಯಾರಿಗೆ? ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.




ಈಗಾಗಲೇ ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳಿರುವ ಕಾರಣ  ಒಂದು ಪಕ್ಷಕ್ಕೆ ಬೆಂಬಲ ನೀಡಿದರೆ ಮತ್ತೊಂದು ಪಕ್ಷದ ವಿರೋಧ ಕಟ್ಟಿಕೊಳ್ಳುವ ಆತಂಕ ಇದೀಗ  ಮಂಡ್ಯ ಸಂಸದೆ ಸುಮಲತಾ ಅವರಿಗೆ ಎದುರಾಗಿದೆ.


ಈ ಹಿನ್ನಲೆಯಲ್ಲಿ ಎರಡು ಪಕ್ಷದ ಮುಖಂಡರ ಮೆಚ್ಚುಗೆ ಗಿಟ್ಟಿಸಿಕೊಳ್ಳಲು ಸುಮಲತಾ ಮಾಸ್ಟರ್ ಪ್ಲಾನ್ ಮಾಡಿದ್ದು, ಲೋಕಸಭಾ ಚುನಾವಣೆ ರೀತಿಯಲ್ಲೇ ಜಾಣ್ಮೆ ಹೆಜ್ಜೆ ಹಿಡಲು ನಿರ್ಧಾರ ಮಾಡಿದ್ದಾರೆ. ಅದಕ್ಕಾಗಿ  ತಮಗೆ ಜನರೇ ಹೈಕಮಾಂಡ್ ಆಗಿರುವುದರಿಂದ ಬೆಂಬಲದ ಬಗ್ಗೆ ಜನಾಭಿಪ್ರಾಯ ಕೇಳುವತ್ತ ಸುಮಲತಾ ಚಿತ್ತಹರಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ