ಕೆಜಿಎಫ್ನಲ್ಲಿ ಕೆಲಸ ಮಾಡುತ್ತಿದ್ದ ವಿನಾಯಕ್ಗೆ ಎರಡು ವರ್ಷದ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿತ್ತು. ಶಾಂತಿನಗರದ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹಿರಿಯ ಅಧಿಕಾರಿ ವಿಪರೀತ ಕಿರುಕುಳ ನೀಡುತ್ತಾರೆ ಎಂದು ಮನೆಯವರ ಬಳಿ ಹೇಳಿಕೊಂಡಿದ್ದರಂತೆ. ಇದೇ ಕಾರಣಕ್ಕಾಗಿ ಕಳೆದ ಹತ್ತು ದಿನದಿಂದ ಕೆಲಸಕ್ಕೆ ಸಹ ಹೋಗದೆ ಮನೆಯಲ್ಲಿಯೇ ಇದ್ದರೆಂದು ತಿಳಿದು ಬಂದಿದೆ.