ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ

ಸೋಮವಾರ, 28 ಆಗಸ್ಟ್ 2023 (19:02 IST)
ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ. ನಮ್ಮ ಪಕ್ಷದ ಯಾವುದೇ ಶಾಸಕರು, ಕಾರ್ಯಕರ್ತರು ಕಾಂಗ್ರೆಸ್​ಗೆ ಹೋಗಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕುಮಾರ್ ಬಂಗಾರಪ್ಪ ನಮ್ಮ ನಾಯಕರಾಗಿದ್ದಾರೆ. ಅವರು ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾಂಗ್ರೆಸ್​​​ನವರು ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ. ಅವರ ಆಮಿಷಗಳಿಗೆ ನಮ್ಮವರು ಯಾರೂ ಬಲಿಯಾಗಲ್ಲ. ಕಾಂಗ್ರೆಸ್​ನವರ ಪೊಳ್ಳು ಆಮಿಷಗಳಿಗೆ ಯಾರು ಕೂಡ ಬಲಿಯಾಗಲ್ಲ. ಬರಗಾಲದಂತಹ ಸಂದರ್ಭದಲ್ಲಿ ಸರ್ಕಾರ ಸ್ಪಂದಿಸುವ ಕೆಲಸವಾಗುತ್ತಿಲ್ಲ. ಇಡೀ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ