ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ಜಿಂದಾಲ್ ವಿರುದ್ಧ ಆನಂದ್ ಸಿಂಗ್ ಪತ್ರ ಬರೆದಿದ್ದರು. ಕಾಂಗ್ರೆಸ್ ಶಾಸಕರಾಗಿದ್ದಾಗ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಜಿಂದಾಲ್ ಈಸ್ಟ್ ಇಂಡಿಯಾ ಕಂಪೆನಿ ಎಂದು ಹೇಳಿದ್ದರು. ಈಗ ಸಚಿವರಾದ ಬಳಿಕ ಹೇಗೆ ಭೂಮಿ ಮಾರಿದ್ದಾರೆ? ಹೆಚ್.ಕೆ.ಪಾಟೀಲ್ ಕೂಡ ಭೂಮಿ ಮಾರಾಟ ವಿರೋಧಿಸಿದ್ದರು. ಮೈತ್ರಿ ಸರ್ಕಾರದ ಭಾಗವಾಗಿದ್ದರೂ ವಿರೋಧ ಮಾಡಿದ್ದರು. ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆಂದು ಪ್ರಶ್ನೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.