ಒಂದೇ ವೇದಿಕೆಯಲ್ಲಿ ಅನಿತಾ-ಡಿಕೆಶಿ: ಏನಂದ್ರು ಎಚ್ ಡಿ ಕುಮಾರಸ್ವಾಮಿ?

ಸೋಮವಾರ, 27 ನವೆಂಬರ್ 2017 (11:01 IST)
ಬೆಂಗಳೂರು: ಕನಕ ಉತ್ಸವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ಅನಿತಾ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

ಕುಮಾರಸ್ವಾಮಿ ರಾಜಕೀಯ ಎದುರಾಳಿ ಎಂದೇ ಪರಿಗಣಿಸಲ್ಪಡುವ ಸಚಿವ ಡಿಕೆ ಶಿವಕುಮಾರ್ ರನ್ನು ಪತ್ನಿ ಅನಿತಾ ಕುಮಾರಸ್ವಾಮಿ ಭೇಟಿಯಾಗಿದ್ದಕ್ಕೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಅವರಿಬ್ಬರೂ ಕಾರ್ಯಕ್ರಮದಲ್ಲಿ ಸಹಜವಾಗಿ ಭೇಟಿಯಾಗಿದ್ದಾರೆಯೇ ಹೊರತು ರಾಜಕೀಯ ಉದ್ದೇಶದಿಂದಲ್ಲ. ನಾವು ಸಮಾಜದ ವಿಚಾರದಲ್ಲಿ ಒಗ್ಗಟ್ಟಾಗಿರುತ್ತೇವೆಯೇ ಹೊರತು, ರಾಜಕೀಯ ವಿಚಾರದಲ್ಲಿ ನಮ್ಮಿಬ್ಬರ ದಾರಿ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ