ಯಡಿಯೂರಪ್ಪ ಜೈಲಿಗೆ ಹೋದಾಗ ತುಂಬಾ ನೋವಾಗಿತ್ತು: ಕುಮಾರಸ್ವಾಮಿ

ಶುಕ್ರವಾರ, 10 ಫೆಬ್ರವರಿ 2017 (13:24 IST)
ಕಾಂಗ್ರೆಸ್ ಪಕ್ಷದವರು ಯಡಿಯೂರಪ್ಪರನ್ನು  ಜೈಲಿಗೆ ಕಳುಹಿಸುವಂತೆ ಮಾಡಿದರು. ಅವರು ಜೈಲಿಗೆ ಹೋದಾಗ ನನಗೆ ತುಂಬಾ ನೋವಾಗಿತ್ತು ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬ್ಯಾಟಿಂಗ್ ನಡೆಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ, ಯಡಿಯೂರಪ್ಪ ವಿರುದ್ಧ ನೀಡಿದ ಹೇಳಿಕೆಗಳು ಬೇಸರ ತಂದಿವೆ. ಯಡಿಯೂರಪ್ಪ ಅವರಿಗೆ ಬಂದ ಪರಿಸ್ಥಿತಿ ನಾಳೆ ನಮಗೂ ಬರಬಹುದು. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸಚಿವರ ಆದೇಶಗಳಿಗೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಲೇವಡಿ ಮಾಡಿದರು.
 
ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಿ ಮತ್ತೆ ಅಧಿಕಾರಕ್ಕೆ ತರುವುದೇ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ