ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್: ಸಿಎಂ ಸಿದ್ದರಾಮಯ್ಯ ಲೇವಡಿ

ಶುಕ್ರವಾರ, 26 ಫೆಬ್ರವರಿ 2016 (14:14 IST)
ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್. ಯಾವ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.  
 
ದುಬೈನಲ್ಲಿರುವ ಡಾ. ಗಿರೀಶ್ ಚಂದ್ರ ಶರ್ಮಾ ಸಚಿವ ಮಹಾದೇವಪ್ಪ ಅವರಿಗೂ ಸ್ನೇಹಿತರಾಗಿದ್ದಾರೆ. ಯಾವುದೇ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭ್ರಷ್ಟರನ್ನು ರಕ್ಷಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಕಳೆದ ಜೂನ್ ತಿಂಗಳಲ್ಲಿ ಡಾ.ಗಿರೀಶ್ ನನಗೆ ವಾಚ್ ಗಿಫ್ಟ್ ನೀಡಿದ್ದು, ಮಾರ್ಚ್ ತಿಂಗಳಲ್ಲಿ ಅದರ ತೆರಿಗೆ ಕಟ್ಟುತ್ತೇನೆ. ವಾಚ್ ಹರಾಜಿಗಿಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಇಲವಾಲ್ ಕೇಸ್‌ನಲ್ಲಿ ಭ್ರಷ್ಟರನ್ನು ರಕ್ಷಿಸಲಾಗಿದೆ ಎನ್ನುವ ಕುಮಾರಸ್ವಾಮಿ ಆರೋಪಗಳಲ್ಲಿ ಸತ್ಯಂಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ