ಕುಮಾರಸ್ವಾಮಿ ಬ್ಲಾಕ್‌ಮೇಲ್ ರಾಜಕಾರಣಿ: ಬಿಜೆಪಿ

ಭಾನುವಾರ, 26 ಫೆಬ್ರವರಿ 2017 (11:44 IST)
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ವಸೂಲಿ ಮಾಡಿ ಗೊತ್ತಿದೆಯೇ ಹೊರತು ಕೊಟ್ಟು ಗೊತ್ತಿಲ್ಲ. ಅವರೊಬ್ಬ ಬ್ಲಾಕ್‌ಮೇಲ್ ರಾಜಕಾರಣಿ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.  
 
ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದರಿಂದ ಕುಮಾರಸ್ವಾಮಿಗೆ ವಸೂಲಿ ಮಾಡುವುದು ಮಾತ್ರ ಗೊತ್ತಿದೆ. ಕಾಂಗ್ರೆಸ್ ಪಕ್ಷ ಕೂಡಾ ಅವರದ್ದೇ ದಾರಿಯಲ್ಲಿ ಸಾಗುತ್ತಿದೆ ಎಂದು ಲೇವಡಿ ಮಾಡಿದರು.
 
ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಕಪ್ಪ ಕೊಟ್ಟಿದ್ದು ನಿಜ. ಡೈರಿ ಬಗ್ಗೆ ಸೂಕ್ತ ತನಿಖೆಯಾದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ