ಕುಣಿಕಲ್: ರಾಮನವಮಿ ಪಾನಕ ಸೇವಿಸಿ 42ಕ್ಕೂ ಅಧಿಕ ಮಂದಿ ಅಸ್ವಸ್ಥ
ಇದನ್ನು ಕುಡಿದ ಕೆಲವರಿಗೆ ಸಂಜೆಯಾಗುತ್ತಿದ್ದಂತೆ ವಾಂತಿ, ಭೇದಿಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಲ್ಲೂಕು ಆರೋಗ್ಯ ಅಧಿಕಾರಿ ಮರಿಯಪ್ಪ, ಆಡಳಿತಾಧಿಕಾರಿ ಗಣೇಶಬಾಬು ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಇನ್ನೂ ಘಟನೆಗೆ ದೋಷ ಪೂರಿತ ಪಾನಕ ಸೇವನೆಯೇ ಘಟನೆಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.