ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ರಾಜ್ಯದಲ್ಲಿ ವೈದ್ಯರ ಕೊರತೆ ಇದೆ. ಇದರಿಂದ ರೋಗಿಗಳ ಆರೋಗ್ಯ ತಪಾಸಣೆಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ಶೀಘ್ರದಲ್ಲಿಯೇ ಇಲಾಖೆಗೆ ನೇಮಕಾತಿ ನಡೆಯಲಿದ್ದು, 963 ಮಂದಿ ತಜ್ಞ ವೈದ್ಯರು, 360 ಸಾಮಾನ್ಯ ವೈದ್ಯರು, 82 ಮಂದಿ ದಂತ ವೈದ್ಯರು ಹಾಗೂ 3500 ಮಂದಿ ಪ್ಯಾರಾಮೆಡಿಕಲ್ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಇದೇ ವೇಳೆ, ಜಿಲ್ಲೆಯ ಜಿಲ್ಲಾಸ್ಪತ್ರೆಯನ್ನು ಮತ್ತೆ ಆರೋಗ್ಯ ಇಲಾಖೆ ವಶಕ್ಕೆ ಪಡೆಯುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದ್ದು, 2016ರ ಏಪ್ರಿಲ್ ತಿಂಗಳ ಒಳಗೆ ವಶಕ್ಕೆ ಪಡೆಯಲಾಗುತ್ತದೆ ಎಂದರು.