ಬರ ನಿರ್ವಹಣೆಯಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ಸಚಿವ ಗರಂ

ಗುರುವಾರ, 25 ಅಕ್ಟೋಬರ್ 2018 (16:37 IST)
ಸಚಿವರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಬರ ನಿರ್ವಹಣೆಯಲ್ಲಿ ಅಧಿಕಾರಿಗಳಿಂದ ಲೋಪಕಂಡು ಬಂದ ಹಿನ್ನಲೆ ಸಚಿವರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಗರಂ ಆದ ಘಟನೆ ನಡೆದಿದೆ.

ಬೀದರ್ ನಲ್ಲಿ ಅಧಿಕಾರಿಗಳಿಗೆ ಹಿಗ್ಗಾಮಗ್ಗಾ ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆ‌ಂಪೂರ್, ನೀರಿನ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗೆ ಪರಿಹಾರ ನೀಡಲು ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಿಡಿಕಾರಿದರು.
ಅಧಿಕಾರಿಗಳ ಸಭೆ ಕರೆದಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಂಡೆಪ್ಪ ಕಾಶೆಂಪೂರ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವರು ಕೆಂಡಾಮಂಡಲವಾದರು.

ಮುಂದೆ ನೀರಿನ ಸಮಸ್ಯೆ ಬಂದ್ರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದರು.  
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಅಧಿಕಾರಿಗಳ ಸಭೆಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ‌ ಎಚ್.ಆರ್ ಮಹಾದೇವ, ಜಿಲ್ಲಾ ಪಂಚಾಯತಿ ಸಿಇಓ ಮಹಾಂತೇಶ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ