ದಸರಾಗೆ ಕಾಡಿನಿಂದ ನಾಡಿಗೆ ಆಗಮಿಸಿದ ಲಕ್ಚ್ಮೀ ಆನೆ..!

ಬುಧವಾರ, 14 ಸೆಪ್ಟಂಬರ್ 2022 (21:06 IST)
ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಲಕ್ಷ್ಮಿ ಎಂಬ ಆನೆ ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ. ರಾಂಪುರ ಆನೆ ಶಿಬಿರದಲ್ಲಿ ಲಕ್ಷ್ಮಿ ಅರ್ಜುನ ಆನೆ ಜೊತೆ ಸೇರಿತ್ತು. ತಾಯಿ ಆನೆ ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿವೆ. 15 ವರ್ಷದ ಹಿಂದೆ ದಸರೆಗೆ ಬಂದಿದ್ದ ಸರಳ ಸಹಾ ಅರಮನೆಯಲ್ಲೇ ಮರಿಗೆ ಜನ್ಮ ನೀಡಿತ್ತು. ಸರಳ ಜನ್ಮ ನೀಡಿದ ಮರಿಗೆ ಚಾಮುಂಡಿ ಎಂದು ಹೆಸರಿಡಲಾಗಿತ್ತು.ಲಕ್ಷ್ಮಿ ಹಾಗೂ ಮರಿ ಆನೆಗಳನ್ನು ಲಾಯದಿಂದ ಬೇರ್ಪಡಿಸಿದ ಅರಣ್ಯ ಇಲಾಖೆ. 
ನಿರ್ಬಂಧಿತ ಪ್ರದೇಶದಲ್ಲಿ ಲಕ್ಷ್ಮಿಗೆ ಆರೈಕೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ