ಲಕ್ಷ ಮೌಲ್ಯದ ಶ್ರೀಗಂಧದ ಮರ ಎಗರಿಸಿದ ಕಳ್ಳರು

ಶುಕ್ರವಾರ, 27 ಸೆಪ್ಟಂಬರ್ 2019 (17:14 IST)
ಲಕ್ಷ ಲಕ್ಷ ಮೌಲ್ಯದ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆ ಕೊಪ್ಪಳ ತಾಲೂಕಿನ ಚಿಕ್ಕ ಸೂಳಿಕೇರಿ ವ್ಯಾಪ್ತಿಯಲ್ಲಿ ಶ್ರೀಗಂಧದ ಮರ ಕಳ್ಳತನವಾಗಿದೆ.

ಮುಕ್ಕಲಪ್ಪ ದೇಸಾಯಿ ಎಂಬುವರ ಹೊಲದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಸವೆ೯ ನಂಬರ್ 40ರಲ್ಲಿರುವ ಶ್ರೀಗಂಧದ ಮರ ಕಳ್ಳತನ ಆಗಿರೋದ್ರಿಂದ ಕಂಗಾಲಾದ ರೈತ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.

ಸುಮಾರು ಒಂದು ಲಕ್ಷ ಬೆಲೆ ಬಾಳುವ ಶ್ರೀಗಂಧದ ಮರವನ್ನು ರಾತ್ರಿ ಕಳ್ಳತನ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ