ಮಾಜಿ ಶಾಸಕ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಆರೋಪ

ಮಂಗಳವಾರ, 20 ಡಿಸೆಂಬರ್ 2016 (11:16 IST)
ಬಿಜೆಪಿ ಪಕ್ಷದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.  
ಅಧಿಕಾರ ದುರುಪಯೋಗ ಮಾಡಿಕೊಂಡು ಲೊಕೇಶ್ ಎನ್ನುವವರಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
 
ಒತ್ತುವರಿಯಾಗಿರುವ ಜಾಗದಲ್ಲಿ ಗ್ರಾಮಸ್ಥರು ಹಾಗೂ ಸಿಪಿಐ ಪಕ್ಷದ ಕಾರ್ಯಕರ್ತರ ಸಹಾಯದೊಂದಿಗೆ ಲೊಕೇಶ್ ಅವರ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.  
 
ಮೂಡಿಗೇರೆ ತಾಲೂಕಿನ ಕೂವೆ ಗ್ರಾಮದ ಕಲ್ಮನೆಯಲ್ಲಿ ಲೊಕೇಶ್‌ ಅವರಿಗೆ ಸೇರಿದ ಮೂರು ಎಕರೆ ಜಾಗವನ್ನು ಬಿಜೆಪಿಯ ಮಾಜಿ ಶಾಸಕ ಕುಮಾರಸ್ವಾಮಿ ಒತ್ತುವರಿ ಮಾಡಿ, ಕಾಫಿ ತೋಟವನ್ನಾಗಿ ಪರಿವರ್ತನೆ ಮಾಡಿದ್ದಾರೆ ಎಂದು ಲೊಕೇಶ್ ಗಂಭೀರವಾಗಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ