ಬಿಎಸ್‌ವೈ ಮತ್ತು ಪುತ್ರರ ವಿರುದ್ಧ ಭೂ ಕಬಳಿಕೆ ದೂರು ದಾಖಲು

ಮಂಗಳವಾರ, 17 ಅಕ್ಟೋಬರ್ 2017 (15:47 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಮತ್ತೊಂದು ಭೂ ಕಬಳಿಕೆ ದೂರು ದಾಖಲಾಗಿದೆ.
ಬೆಂಗಳೂರಿನ ಭೂಕಬಳಿಕೆ ನ್ಯಾಯಾಲಯದಲ್ಲಿ ಹನುಮೇಗೌಡ ಎನ್ನುವವರು ದೂರು ದಾಖಲಿಸಿದ್ದಾರೆ
 
ಬಿಎಸ್‌ವೈ ಪುತ್ರರಾದ ರಾಘವೇಂದ್ರ ಮತ್ತು ವಿಜಯೇಂದ್ರ ಶಿಖಾರಿಪುರ ತಾಲೂಕಿನ ಅಂಜನಾಪುರದಲ್ಲಿರುವ ತಮ್ಮ ಒಡೆತನದ ಶಾಲೆಗಾಗಿ 25 ಎಕರೆ ಭೂಮಿಯನ್ನು ಕಬಳಿಸಿದ್ದಾರೆ ಎನ್ನುವ ದೂರು ದಾಖಲಾಗಿದೆ. 
 
ಬಿಎಸ್‌ವೈ ಮತ್ತು ಅವರ ಮಕ್ಕಳ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ವಿಪಕ್ಷಗಳಿಗೆ ಟೀಕಿಸಲು ಮತ್ತೊಂದು ಅಸ್ತ್ರ ದೊರೆತಂತಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ